ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಕಾಂಗ್ರೆಸ್ ಶಾಸಕರಿಗೆ ಇನ್ನು ಪಕ್ಷದಲ್ಲಿ ಜಾಗವಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಸ್ಪಷ್ಟಪಡಿಸಿದ್ದಾರೆ. ಶಾಸಕರ ಅನರ್ಹತೆ, ಹಾಗೂ ರಾಜೀನಾಮೆ ವಿಚಾರ ಇನ್ನೂ ಸ್ಪೀಕರ್ ರಮೇಶ್ ಕುಮಾರ್ ಅವರ ಮುಂದಿದೆ.


ರಾಜ್ಯದಲ್ಲಿ ಮೈತ್ರಿ ಸರ್ಕಾರ ವಿಶ್ವಾಸಮತ ಸಾಬೀತು ಮಾಡದೇ ಸೋಲು ಕಂಡಿದೆ. ಕುಮಾರಸ್ವಾಮಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆದರೆ ರಾಜೀನಾಮೆ ಕೊಟ್ಟು ಪಕ್ಷಕ್ಕೆ ದ್ರೋಹ ಮಾಡಿದ ಶಾಸಕರಿಗೆ ತಕ್ಕ ಪಾಠ ಕಲಿಸೋಕೆ ಕಾಂಗ್ರೆಸ್-ಜೆಡಿಎಸ್ ಪಕ್ಷಗಳು ಮುಂದಾಗಿವೆ.


ಈ ಕುರಿತು ಟ್ವೀಟ್ ಮಾಡಿದ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಅತೃಪ್ತ ಶಾಸಕರಿಗೆ ತಕ್ಕ ಪಾಠ ಕಲಿಸಲಾಗುತ್ತದೆ ಎನ್ನುವ ಅರ್ಥದಲ್ಲಿ ಮಾತನಾಡಿದ್ದಾರೆ. "ಬೆನ್ನಿಗೆ ಚೂರಿ ಹಾಕಿರುವ ಕಾಂಗ್ರೆಸ್ ಶಾಸಕರು" ಎಂದು ಅವರು ತಮ್ಮ ಟ್ವೀಟ್ ಆರಂಭ ಮಾಡಿದ್ದಾರೆ. 


ನಮ್ಮ ಬೆನ್ನಿಗೆ ಚೂರಿ ಹಾಕಿರೋ ಕಾಂಗ್ರೆಸ್ ಶಾಸಕರಿಗೆ ಈಗಿನ ಬೆಳವಣಿಗಳನ್ನು ನೋಡಿ ನಿರಾಸೆ ಆಗುರಬಹದು. ಏನಾದರೂ ಆಗಲಿ, ಇಂದು ಅಂಶ ಸ್ಪಷ್ಟ. ಅವರಿಗೆ ಕಾಂಗ್ರೆಸ್ ಪಕ್ಷದಲ್ಲಿ ಜಾಗವಿಲ್ಲ ಎಂದು ಟ್ವೀಟ್ ಮಾಡಿದ್ದಾರೆ. 
------------


Find out more: